Karnataka Jobs: ವಿಕಲಚೇತನರ & ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನೇಮಕಾತಿ- ಡಿಗ್ರಿ ಆಗಿದ್ರೆ ಅರ್ಜಿ ಹಾಕಿ

Karnataka Jobs: ವಿಕಲಚೇತನರ & ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನೇಮಕಾತಿ- ಡಿಗ್ರಿ ಆಗಿದ್ರೆ ಅರ್ಜಿ ಹಾಕಿ

 DWDSC Karnataka Recruitment 2023:



 ಕರ್ನಾಟಕ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ (Department for the Empowerment of Differently Abled and Senior Citizens Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ರಾಜ್ಯ ಕೋ-ಆರ್ಡಿನೇಟರ್ (State Co-Ordinator) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. DWDSC ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ, ಜುಲೈ 24, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್​ಲೈನ್ (Offline) ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆ ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ

ಹುದ್ದೆ ರಾಜ್ಯ ಕೋ-ಆರ್ಡಿನೇಟರ್

ಒಟ್ಟು ಹುದ್ದೆ 1

ವಿದ್ಯಾರ್ಹತೆ ಪದವಿ

ವೇತನ ತಿಂಗಳಿಗೆ 50,000 ರೂ.

ಉದ್ಯೋಗದ ಸ್ಥಳ ಬೆಂಗಳೂರು

ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 24, 2023

ಶೈಕ್ಷಣಿಕ ಅರ್ಹತೆ:

ಕರ್ನಾಟಕ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಕಂಪ್ಯೂಟರ್ ಸೈನ್ಸ್​/ ಐಟಿಯಲ್ಲಿ ಡಿಪ್ಲೊಮಾ, ಕಂಪ್ಯೂಟರ್ ಎಜುಕೇಷನ್​ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕರ್ನಾಟಕ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 24, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಕರ್ನಾಟಕ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 50,000 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:

ಕರ್ನಾಟಕ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ನಿರ್ದೇಶಕರ ಕಛೇರಿ

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ

ಪೋಡಿಯಂ ಬ್ಲಾಕ್

ವಿ.ವಿ ಟವರ್

ಡಾ. ಬಿ.ಆರ್. ಅಂಬೇಡ್ಕರ್ ವೇದಿಕೆ

ಬೆಂಗಳೂರು-560001


ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/07/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 24, 2023

ಇನ್ನೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22866066, 22860907 ಗೆ ಕರೆ ಮಾಡಿ.

Post a Comment

Previous Post Next Post
CLOSE ADS
CLOSE ADS
×