borewell subsidy- ದೇವರಾಜು ಅರಸು ನಿಗಮದಿಂದ ಬೋರ್ವೆಲ್ ಕೊರೆಸಲು 4.75 ಲಕ್ಷ ಪಡೆಯಲು ಅರ್ಜಿ ಆಹ್ವಾನ!

borewell subsidy- ದೇವರಾಜು ಅರಸು ನಿಗಮದಿಂದ ಬೋರ್ವೆಲ್ ಕೊರೆಸಲು 4.75 ಲಕ್ಷ ಪಡೆಯಲು ಅರ್ಜಿ ಆಹ್ವಾನ!

borewell  application:-ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(devaraj arasu nigama) ನಿಯಮಿತದಿಂದ ಸಬ್ಸಿಡಿಯಲ್ಲಿ ಕೊಳವೆ ಬಾವಿಯನ್ನು ಕೊರೆಸಲು(borewell subsidy yojana-2024) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.




borewell subsidy- ದೇವರಾಜು ಅರಸು ನಿಗಮದಿಂದ ಬೋರ್ವೆಲ್ ಕೊರೆಸಲು 4.75 ಲಕ್ಷ ಪಡೆಯಲು ಅರ್ಜಿ ಆಹ್ವಾನ!
ಹಿಂದುಳಿದ ವರ್ಗಗಳ ರೈತರು ನೀರಾವರಿ ಸೌಲಭ್ಯವನ್ನು ಮಾಡಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದು ಅರ್ಥಿಕವಾಗಿ ಸಬಲರಾಗಲು ಕೊಳವೆ ಬಾವಿಯನ್ನು ಕೊರೆಸಲು ನೆರವು ನೀಡಲು ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯನ್ನು(ganga kalyana yojane) ಜಾರಿಗೆ ತರಲಾಗಿದೆ.

ಈ ಯೋಜನೆಯ ಪ್ರಯೋಜನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ganga kalyana- ಗಂಗಾ ಕಲ್ಯಾಣ ಯೋಜನೆಯಡಿ ಎಷ್ಟು ಸಬ್ಸಿಡಿ ನೀಡಲಾಗುತ್ತದೆ?

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಬ್ಸಿಡಿಯಲ್ಲಿ ಕೊಳವೆ ಬಾವಿಯನ್ನು ಕೊರೆಸಲು ಅರ್ಥಿಕ ನೆರವು ನೀಡಲಾಗುತ್ತದೆ ಇದರ ವಿವರ ಈ ಕೆಳಗಿನಂತಿದೆ.

1) ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ರೂ.4.75 ಲಕ್ಷ ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೂಳವೆ ಬಾವಿಗೆ ರೂ.75,000/-ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು. 

2) ಇನ್ನುಳಿದ ಜಿಲ್ಲೆಗಳಿಗೆ ರೂ.3.75 ಲಕ್ಷಗಳು ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ ರೂ.75,000/-ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/-ಗಳ ಸಾಲವನ್ನು ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. 

Required Documents- ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳು:

1) ಅರ್ಜಿದಾರರ ಆಧಾರ್ ಕಾರ್ಡ. 

2) ಬ್ಯಾಂಕ್ ಪಾಸ್ ಬುಕ್ ಪ್ರತಿ.

3) ಅರ್ಜಿದಾರರ ಪೋಟೋ.

4) ಜಾತಿ ಮತ್ತು ಆದಾಯ ಪ್ರಮಾಣ ಪತ್ರ.

5) ಜಮೀನಿನ ಪಹಣಿ/RTC.

6) ರೇಶನ್ ಕಾರ್ಡ ಪ್ರತಿ

7) ಅರ್ಜಿದಾರರ ಮೊಬೈಲ್ ಸಂಖ್ಯೆ

How to apply ganga kalyana scheme- ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಅರ್ಹ ರೈತರು ಈ ಯೋಜನೆಯ ಪ್ರಯೋಜನ ಪಡೆಯಲು ನಿಮ್ಮ ಮೊಬೈಲ್ ಮೂಲಕ ಸೇವಾ ಸಿಂಧು ಪೋರ್ಟಲ್ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರವನ್ನು ಅಗತ್ಯ ದಾಖಲೆಗಳ ಸಮೇತ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

Who can apply for ganga kalyana yojana- ಅರ್ಜಿ ಸಲ್ಲಿಸಲು ಅರ್ಹರು:

1) ನಿಗಮದಿಂದ ಸಬ್ಸಿಡಿಯಲ್ಲಿ ಬೋರ್ವೆಲ್ ಕೊರೆಸಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎನ್ನುವ ವಿವರ ಹೀಗಿದೆ.

2) ಸಣ್ಣ ಮತ್ತು ಅತಿ ಸಣ್ಣ ರೈತರು ಅರ್ಜಿ ಸಲ್ಲಿಸಬವುದು.

3) ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.

4) ಅರ್ಜಿದಾರ ಯಾವುದೇ ರಾಜ್ಯ-ಕೇಂದ್ರ ಸರಕಾರದ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರಬಾರದು.

5) ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

6) ಅರ್ಜಿದಾರರ ವಯಸ್ಸು 18-55 ವರ್ಷದ ನಡುವೆ ಇರಬೇಕು.

7) ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯವನ್ನು ಈ ಯೋಜನೆಯಡಿ ಒದಗಿಸಲಾಗುವುದು. 

Ganga kalyana online application-ಉಪಯುಕ್ತ ವೆಬ್ಸೈಟ್ ಲಿಂಕ್ ಗಳು:

  • ಅರ್ಜಿ ಸಲ್ಲಿಸಲು ಸೇವಾ ಸಿಂಧು ವೆಬ್ಸೈಟ್: Apply Now
  • ಸಹಾಯವಾಣಿ: 80-22374832, 8050770004, 805077000

Post a Comment

Previous Post Next Post
CLOSE ADS
CLOSE ADS
×