Land purchase scheme- 25 ಲಕ್ಷದಲ್ಲಿ ಶೇ 50% ಸಬ್ಸಿಡಿಯಲ್ಲಿ ಕೃಷಿ ಜಮೀನು ಖರೀದಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Land purchase scheme- 25 ಲಕ್ಷದಲ್ಲಿ ಶೇ 50% ಸಬ್ಸಿಡಿಯಲ್ಲಿ ಕೃಷಿ ಜಮೀನು ಖರೀದಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Land purchase scheme application 2024:-ಭೂ ಒಡೆತನ ಯೋಜನೆಯಡಿ(Land purchase scheme) ಕೃಷಿ ಜಮೀನು ಇಲ್ಲದ ಅಂದರೆ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಜಮೀನನ್ನು ಖರೀದಿ ಮಾಡಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಳ್ಳಲು ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.



ಏನಿದು ಭೂ ಒಡೆತನ ಯೋಜನೆ? ಯಾರೆಲ್ಲ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳೇನು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?(Land purchase yojana application) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅರ್ಥಿಕ ಅಭಿವೃದ್ದಿಗಾಗಿ ಕಲ್ಯಾಣ ಯೋಜನೆಗಳಲ್ಲಿ ಒಂದಾದ ಭೂ ಒಡೆತನ ಯೋಜನೆಯ(bho odethana yojane) ಸೌಲಭ್ಯ ಪಡೆಯಲು ವಿವಿಧ ನಿಗಮಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

Bhoo odethana yojana application- ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

1) ಅರ್ಜಿದಾರರ ಆಧಾರ್ ಕಾರ್ಡ.

2) ಜಾತಿ ಮತ್ತು ಆದಾಯ ಪ್ರಮಾಣ ಪತ್ರ.

3) ಭೂ ರಹಿತ ಕೃಷಿ ಕಾರ್ಮಿಕರ ಪ್ರಮಾಣ ಪತ್ರ(ತಹಸೀಲ್ದಾರರಿಂದ).

4) ರೇಷನ್ ಕಾರ್ಡ/ಪಡಿತರ ಚೀಟಿ ಪ್ರತಿ.

5) ಬ್ಯಾಂಕ್ ಪಾಸ್ ಬುಕ್ ಪ್ರತಿ.

6) ಪೋಟೋ

bhoo odethana scheme online application link-ಅರ್ಜಿ ಸಲ್ಲಿಕೆ ವಿಧಾನ:

ಅರ್ಹ ಅರ್ಜಿದಾರರು ಮೇಲೆ ತಿಳಿಸಿರುವ ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಈ ಲಿಂಕ್ Apply Now ಮೇಲೆ ಕ್ಲಿಕ್ ಮಾಡಿ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಿ ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

bhoo odethana yojana last date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 

ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ದಿನಾಂಕ: 10 ಅಕ್ಟೋಬರ್ 2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು:

ಭೂ ಒಡೆತನ ಯೋಜನೆಯಡಿ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ಕೃಷಿ ಜಮೀನು ಇಲ್ಲದೇ ಇರುವ ಮಹಿಳಾ ಕೃಷಿ ಕಾರ್ಮಿಕ ಅರ್ಜಿ ಸಲ್ಲಿಸಬಹುದು.

bhoo odethana yojana subsidy details- ಭೂ ಒಡೆತನ ಯೋಜನೆ ಸಹಾಯಧನ ವಿವರ ಹೀಗಿದೆ:

ಭೂ ಒಡೆತನ ಯೋಜನೆ ಸಹಾಯಧನ ಮಾಹಿತಿ ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸೀಮಿತಗೊಂಡಂತೆ ಈ ಯೋಜನೆಯಡಿ ಘಟಕ ವೆಚ್ಚವನ್ನು ರೂ.25.00 ಲಕ್ಷಗಳು ಮತ್ತು ಉಳಿದ 26 ಜಿಲ್ಲೆಗಳಲ್ಲಿ ಘಟಕ ವೆಚ್ಚವನ್ನು ರೂ.20.00 ಲಕ್ಷಗಳಿಗೆ ನಿಗದಿಪಡಿಸಲಾಗಿರುತ್ತದೆ. ಒಟ್ಟು ಘಟಕ ವೆಚ್ಚದಲ್ಲಿ ಶೇ.50 ರಷ್ಟು ಸಹಾಯಧನ ಮತ್ತು ಶೇ.50 ರಷ್ಟು ಅವಧಿಸಾಲವಾಗಿರುತ್ತದೆ. 

ಅವಧಿಸಾಲವನ್ನು ನಿಗಮದಿಂದಲೇ ಭರಿಸಲಾಗುತ್ತದೆ. ಇದಕ್ಕೆ ವಾರ್ಷಿಕ ಶೇ.6ರ ದರದಲ್ಲಿ ಬಡ್ಡಿ ವಿಧಿಸಲಾಗುತ್ತದೆ. ಸಾಲ ಮತ್ತು ಬಡ್ಡಿಯನ್ನು 10 ವರ್ಷಗಳ ಅವಧಿಯಲ್ಲಿ ವಾರ್ಷಿಕ ಸಮ ಕಂತುಗಳಲ್ಲಿ ಮರುಪಾವತಿ ಮಾಡಬೇಕಾಗಿರುತ್ತದೆ.

SC/ST nigamagalu- ಯಾವೆಲ್ಲ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ?

1) ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ.

2) ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮ.

3) ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ.

4) ಕರ್ನಾಟಕ ಭೋವಿ ಅಭಿವೃದ್ದಿ ನಿಗಮ.

5) ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮ.

6) ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ.

useful website links-ಉಪಯುಕ್ತ ವೆಬ್ಸೈಟ್ ಲಿಂಕ್ ಗಳು:

  • ಭೂ ಒಡೆತನ ಯೋಜನೆ ಅರ್ಜಿ ಸಲ್ಲಿಸಲು ಜಾಲತಾಣದ ಲಿಂಕ್: Apply Now
  • ಭೂ ಒಡೆತನ ಯೋಜನೆ ಅಧಿಕೃತ ಮಾರ್ಗಸೂಚಿ/bho odethana yojana Guidelines:- Download Now
  • helpline- ಸಹಾಯವಾಣಿ: 9482300400

Post a Comment

Previous Post Next Post
CLOSE ADS
CLOSE ADS
×