ಜು.19 ಕ್ಕೆ ಪಾಂಡವಪುರದಲ್ಲಿ ಸೌರಶಕ್ತಿ-ಸ್ವ ಉದ್ಯೋಗ ಮೇಳ’ ; ದರ್ಶನ್ ಪುಟ್ಟಣ್ಣಯ್ಯ ಸೆಲ್ಕೊ ಫೌಂಡೇಶನ್ ಮತ್ತು ಪುಟ್ಟಣ್ಣಯ್ಯ ಫೌಂಡೇಶನ್ ಹಾಗೂ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ `ವನ್ನು ಜುಲೈ ೧೯ರ ಬೆಳಿಗ್ಗೆ ೧೦.೩೦ಕ್ಕೆ ಪಾಂಡವಪುರ ಪಟ್ಟಣದ ಟಿಎಪಿಸಿಎಂಎಸ್ನ ರೈತ ಭವನದಲ್ಲಿ ಆಯೋಜಿಸಲಾಗಿದೆ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.
ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರದ ಜಿಡಿಪಿಗೆ ಕೃಷಿ ಶೇ.೪೫ ರಷ್ಟು ಕೊಡುಗೆ ನೀಡುತ್ತಿದ್ದು, ಕೃಷಿಯಲ್ಲಿ ಶೇ.೬೦ರಷ್ಟು ಮಹಿಳೆಯರೇ ತೊಡಗಿದ್ದು, ಕೃಷಿ ಜೊತೆಗೆ ಬಿಡುವಿನ ವೇಳೆಯಲ್ಲಿ ಸ್ವ ಉದ್ಯೋಗ ರೂಪಿಸಿಕೊಳ್ಳಲು ಈ ಕಾರ್ಯಕ್ರಮ ಪ್ರೋತ್ಸಾಹಿಸುತ್ತದೆ ಎಂದರು.
ಸ್ವ ಸಹಾಯ ಸಂಘಗಳು ಹಾಗೂ ಗುಂಪುಗಳನ್ನು ಒಂದೆಡೆ ಸೇರಿಸಿ ಸ್ತ್ರೀ ಸಬಲೀಕರಣದ ಮೂಲಕ ಹೊಸ ಸಾಧ್ಯತೆಗಳನ್ನು ಒದಗಿಸುವುದು ಕಾರ್ಯಕ್ರಮದ ಉದ್ದೇಶವಾಗಿದ್ದು, ಸ್ವ ಉದ್ಯೋಗ ರೂಪಿಸಿಕೊಳ್ಳಲು ಸೌರವಿದ್ಯುತ್ ಆಧಾರಿತ ಯಂತ್ರಗಳ ಮೂಲಕ ಉತ್ಪನ್ನಗಳನ್ನು ತಯಾರಿಸಿ ಹವಾಮಾನ ಸ್ನೇಹಿ ಜೀವನೋಪಾಯ ಪರಿಹಾರಗಳ ಮೂಲಕ ಸಬಲೀಕರಣಕ್ಕೆಉತ್ತೇಜನ ನೀಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಎಂಆರ್ಎಲ್ಎಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗವಿದ್ದು, ಸಂವಾದ, ಯಂತ್ರಗಳ ಪ್ರ್ರಾತ್ಯಕ್ಷತೆ, ಮಾದರಿ ಪ್ರಯೋಗಗಳ ಪ್ರದರ್ಶನ ನೀಡಲು ೧೬ ಮಳಿಗೆಗಳನ್ನು ರೂಪಿಸಲಾಗಿದೆ ಎಂದರು.
ಜಿ.ಪಂ ಸಿಇಓ ಕೆ.ಆರ್.ನಂದಿನಿ, ಸೆಲ್ಕೋ ಫೌಂಡೇಷನ್ನ ನಿರ್ದೇಶಕಿ ಹುದಾ ಜಾಫರ್, ಕ.ರಾ.ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಕೃಷಿ ಜಂಟಿ ನಿರ್ದೇಶಕ ವಿ.ಎಸ್.ಅಶೋಕ್, ತೋಗಾರಿಕೆ ಇಖಾಖೆಯ ಉಪನಿರ್ದೇಶಕಿ ಕೆ.ಎನ್.ರೂಪಶ್ರೀ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ರಾಜಮೂರ್ತಿ.ಎಸ್, ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸೆಲ್ಕೋ ಫೌಂಡೇಶನ್ನ ಪ್ರಕಾಶ್ ಮೇತಿ ಮಾತನಾಡಿ, ಈಗಾಗಲೇ ಉತ್ತರ ಕರ್ನಾಟಕದ ೧೬ ಜಿಲ್ಲೆಗಳಲ್ಲಿ ಈ ಕಾರ್ಯಕ್ರಮದ ಮೂಲಕ ಕೃಷಿಯಲ್ಲಿ ತೊಡಗಿಕೊಂಡ ಮಹಿಳೆಯರಿಗೆ ಸ್ವ ಉದ್ಯೋಗ ರೂಪಿಸಿಕೊಡಲಾಗಿದ್ದು, ಈ ಸ್ವ ಉದ್ಯೋಗ ಆಯ್ಕೆ ಮಾಡಿಕೊಳ್ಳುವ ಮಹಿಳೆಯರಿಗೆ ಯಂತ್ರಗಳ ಅಳವಡಿಕೆ, ಬಳಕೆಗೆ ಸಂಸ್ಥೆಯ ವತಿಯಿಂದ ನೆರವು ನೀಡಲಾಗುವುದು. ಹಣಕಾಸಿನ ವಿಷಯವಾಗಿ ಕೇಂದ್ರ ಸರ್ಕಾರದಿಂದ ಶೇ೩೫ರಷ್ಟು, ರಾಜ್ಯ ಸರ್ಕಾರದಿಂದ ಶೇ ೧೫ರಷ್ಟು ಸೇರಿ ಒಟ್ಟು ಶೇ.೫೦ರಷ್ಟು ಸೌರ ವಿದ್ಯುತ್ ಸೌಲಭ್ಯಕ್ಕೆ ಸಬ್ಸಿಡಿ ದೊರೆಯಲಿದೆ. ಕಾರ್ಯಕ್ರಮದಲ್ಲಿ ೮೦೦ಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳ ಸದಸ್ಯರು ಪಾಲ್ಗೊಳ್ಳುವ ನಿರೀಕ್ಷಯಿದೆ ಎಂದು ಮಾಹಿತಿ ನೀಡಿದರು.
