ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸರ್ಕಾರವು ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಿಹಿ ಸುದ್ದಿ ನೀಡಲು ಸಿದ್ಧವಾಗಿದೆ. ಜೂನ್ ತಿಂಗಳ ಕಂತಿನ ಹಣವನ್ನು ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದ್ದು, ಈಗಾಗಲೇ ಹಣವನ್ನು ಖಜಾನೆಗೆ ಜಮೆ ಮಾಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೌರಿ ಗಣೇಶ ಹಬ್ಬಕ್ಕೆ ಕೊಡುಗೆಯಾಗಿ ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಶೀಘ್ರದಲ್ಲಿ ಸರ್ಕಾರ ಗುಡ್ನ್ಯೂಸ್ ನೀಡಲಿದೆ. ಗೌರಿ ಗಣೇಶ ಹಬ್ಬದ ಹಿನ್ನೆಲೆ ಮುತ್ತೊಂದು ಕಂತಿನ ಹಣ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ. ಈಗಾಗಲೇ ಹಣ ಖಜಾನೆಗೆ ಜಮೆಯಾಗಿದ್ದು, ಶೀಘ್ರದಲ್ಲಿಯೇ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ.
ಗೃಹಲಕ್ಷ್ಮಿ ಯೋಜನೆಯ 1 ಕಂತಿನ ಹಣವು ವರ ಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿತ್ತು. ಜೂನ್ ಹಾಗೂ ಜುಲೈ ಕಂತಿನ ಹಣ ಬಿಡುಗಡೆ ಬಾಕಿ ಇದೆ. ಸದ್ಯ 23 ಕಂತಿನ ಅಂದರೆ, ಜೂನ್ ತಿಂಗಳ ಹಣ 2000 ರೂಪಾಯಿ ಗಣೇಶ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುತ್ತಿದೆ.
ಜಿಲ್ಲಾ ಖಜಾನೆಗಳಿಗೆ ಹಣ ಬಿಡುಗಡೆ
ರಾಜ್ಯ ಖಜಾನೆಯಿಂದ ಜಿಲ್ಲಾ ಖಜಾನೆಗಳಿಗೆ ಸಹಾಯಧನ ಮೊತ್ತ ಬಿಡುಗಡೆಯಾಗಿದೆ. ಈ ವಾರದೊಳಗೆ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ತಿಳಿಸಿವೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಈ ಬಗ್ಗೆ ಹೇಳಿದ್ರು
ಕಳೆದ ವಾರದ ಉಡುಪಿಯಲ್ಲಿ ಮಾಧ್ಯಮಗಳ ಬಳಿ ಮಾತನಾಡಿದ ಮಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಂವನ್ನು ವರ ಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಮತ್ತೊಂದು ಕಂತಿನ ಹಣವನ್ನು ಗೌರಿ ಗಣೇಶ ಹಬ್ಬಕ್ಕೆ ಕೊಡುಗೆಯಾಗಿ ಬಿಡುಗಡೆಗೊಳಸಲು ತಯಾರಿ ನಡೆಯುತ್ತಿದೆ ಎಂದಿದ್ದರು.
ಏನಿದು ಯೋಜನೆ?
ಬೆಲೆ ಏರಿಕೆ ವಿರೋಧಿಸಿ ಕರ್ನಾಟಕ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತು. 5 ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದೆ. ಪ್ರತಿ ತಿಂಗಳು ಅರ್ಹ ಫಲಾನುಭವಿ ಮಹಿಳೆಯರಿಗೆ 2 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತದೆ. 2023 ಆಗಸ್ಟ್ನಲ್ಲಿ ಈ ಯೋಜನೆyu ಆರಂಭವಾಯಿತು. ಈವರೆಗೂ 20 ತಿಂಗಳು ತಲಾ 2 ಸಾವಿರದಂತೆ ಪ್ರತಿ ಫಲಾನುಭವಿಗೂ 40 ಸಾವಿರ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಯುಗಾದಿ ಹಬ್ಬದ ವೇಳೆ ಹಣ ಬಿಡುಗಡೆಯಾಗಿತ್ತು
ಈ ಹಿಂದೆ ಯುಗಾದಿ ಹಬ್ಬದ ವೇಳೆ ಸರ್ಕಾರದಿಂದ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿತ್ತು. ಯುಗಾದಿ ಹಾಗೂ ಮೊಹರಾಂ ವೇಳೆ ಫಲಾನುಭವಿಗಳಿಗೆ ನೆರವಾಗಲಿ ಎಂದು ಸರ್ಕಾರ ಕ್ರಮಕೈಗೊಂಡಿತ್ತು. ಈ ವಾರ ಗಣೇಶ ಹಬ್ಬ, ಮುಂದಿನ ಇದ್ ಮಿಲಾದ್ ಕೂಡ ಇದ್ದು ಹಣ ಬಿಡುಗಡೆಗೆ ಮುಂದಾಗಿದೆ.